ರಾಷ್ಟ್ರೀಯ

ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳದ ರಂಜಿತಾ ಬಗ್ಗೆ ವ್ಯಂಗ್ಯ ಕಮೆಂಟ್ ಮಾಡಿದ್ದ ಅಧಿಕಾರಿ ಅಮಾನತು

ತಿರುವನಂತಪುರಂ: ಅಹಮದಾಬಾದ್ ವಿಮಾನ ಅಪಘಾತದಲ್ಲಿ ಮೃತಪಟ್ಟ ಕೇರಳದ ನರ್ಸ್ ಬಗ್ಗೆ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಕೇರಳ ಸರ್ಕಾರಿ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.


ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿದ್ದ ಪವಿತ್ರನ್ ಅವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಪವಿತ್ರನ್ ಅವರು ವಿಮಾನ ಅಪಘಾತದಲ್ಲಿ ಮೃತಪಟ್ಟ ಪಟ್ಟಣಂತಿಟ್ಟದ ನರ್ಸ್ ರಂಜಿತಾ ಅವರನ್ನು ಅಪಹಾಸ್ಯ ಮಾಡಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ.



ಫೇಸ್‌ಬುಕ್ ಪೋಸ್ಟ್‌ನಲ್ಲಿ, ರಾಜ್ಯ ಕಂದಾಯ ಸಚಿವ ಕೆ. ರಾಜನ್, ಪವಿತ್ರನ್ ಅವರ ಹೇಳಿಕೆ “ಅವಮಾನಕರ” ಎಂದು ಟೀಕಿಸಿದ್ದರು ಮತ್ತು ಪೋಸ್ಟ್ ಅವರ ಗಮನಕ್ಕೆ ಬಂದ ತಕ್ಷಣ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.


ಎರಡು ಮಕ್ಕಳ ತಾಯಿಯಾಗಿರುವ ರಂಜಿತಾ ಅವರು ಯುಕೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ವಿದೇಶದಲ್ಲಿ ಕೆಲಸ ಮಾಡಿದ ನಂತರ ಈಗ ಕೇರಳ ಆರೋಗ್ಯ ಇಲಾಖೆಯಲ್ಲಿ ಅವರಿಗೆ ಕೆಲಸ ಸಿಕ್ಕಿತ್ತು. ಸರ್ಕಾರಿ ಸೇವೆಗೆ ಸೇರಲು ತಮ್ಮ ಕೆಲಸಕ್ಕೆ ಸಂಬಂಧಿಸಿದ ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಕೇರಳಕ್ಕೆ ಬಂದಿದ್ದರು. ಆದರೆ ಯುಕೆ ಆಸ್ಪತ್ರೆಯಲ್ಲಿ ಮಾಡಿಕೊಂಡಿದ್ದ ಒಪ್ಪಂದವನ್ನು ಪೂರ್ಣಗೊಳಿಸಲು ಪತನವಾದ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು.

Leave a Reply

Your email address will not be published. Required fields are marked *

error: Content is protected !!