ಕ್ರೈಂ

ಕಾಸರಗೋಡು; ನವರಾತ್ರಿ ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಹಿಂತಿರುಗುತ್ತಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು



ಕಾಸರಗೋಡು: ಲಾರಿ ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಪಾಲಕುನ್ನು ಎಂಬಲ್ಲಿ ನಡೆದಿದೆ.


ಆನೂರಿನ ಪ್ರಶಾಂತ್ ಎಂಬವರ ಪುತ್ರ ಕರುಣ್(19) ಮೃತ ಯುವಕ. ಸಹಪ್ರಯಾಣಿಕ ಅಭಿನಂದನ್(16) ಗಂಭೀರ ಗಾಯಗೊಂಡಿದ್ದು,ಕಣ್ಣೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಮೂಕಾಂಬಿಕ ಕ್ಷೇತ್ರದಲ್ಲಿ ನಡೆದ ನವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!