ಪುಣೆ: ಸೇತುವೆ ಕುಸಿತ, 25 ಮಂದಿ ನೀರು ಪಾಲಾಗಿರುವುದಾಗಿ ಶಂಕೆ
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮಾವಲ್ ತಾಲೂಕಿನ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿತ ಗೊಂಡಿದ್ದು ಕನಿಷ್ಠ 25 ಮಂದಿ ನೀರು ಪಾಲಾಗಿರುವುದಾಗಿ ಶಂಕಿಸಲಾಗಿದೆ. ಜೂ.15ರಂದು ಮಧ್ಯಾಹ್ನ ದುರ್ಘಟನೆ ನಡೆದಿದೆ.

ಮಾವಲ್ ತಾಲೂಕಿನಲ್ಲಿರುವ ಕುಂದಮಲ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಮಳೆಗಾಲದಲ್ಲಿ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಈ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಕುಂದಮಲಗೆ ತೆರಳಲು ಇಂದ್ರಯಾಣಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿತ್ತು. ಈ ಸೇತುವೆ ಏಕಾಏಕಿ ಕುಸಿದ ಪರಿಣಾಮ ಸೇತುವೆ ಮೇಲಿದ್ದ 25 ಮಂದಿ ನದಿಯಲ್ಲಿ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಈ ಅಪಘಾತದಲ್ಲಿ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬುವುದು ನಿಖರವಾಗಿ ತಿಳಿದುಬಂದಿಲ್ಲ.