ಕ್ರೈಂರಾಷ್ಟ್ರೀಯ

ತೋಡಿನ ನೀರಿನಲ್ಲಿ ಸಿಲುಕಿ ಬಾಲಕ ಮೃತ್ಯು



ಕಾಸರಗೋಡು: ಬಾಲಕನೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ದಾರುಣ ಘಟನೆ ಬಂದ್ಯೋಡು ಸಮೀಪದ ಕೊಕ್ಕೆಜಾಲ್ ನಲ್ಲಿ ಜೂ.16ರಂದು ಮಧ್ಯಾಹ್ನ ನಡೆದಿದೆ.

ಕೊಕ್ಕೆಜಾಲ್ ನಿವಾಸಿ ಸಾದತ್ ಎಂಬವರ ಪುತ್ರ ಸುಲ್ತಾನ್ (7.ವ) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಮನೆಯ ಸಮೀಪ ಆಟವಾಡುತ್ತಿದ್ದ ಬಾಲಕ ನಾಪತ್ತೆಯಾಗಿದ್ದು, ಇದರಿಂದ ಮನೆಯವರು ಗಾಬರಿಗೊಂಡು ಶೋಧ ನಡೆಸಿದ್ದು ಪತ್ತೆಯಾಗಲಿಲ್ಲ. ಬಳಿಕ ಮನೆಯ ಸಮೀಪದ ತೋಡಿನಲ್ಲಿ ಕೊಚ್ಚಿ ಹೋಗಿರಬಹುದು ಎಂಬ ಬಗ್ಗೆ ಸಂಶಯದ ಮೇರೆಗೆ ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಶೋಧ ನಡೆಸಿದ್ದು, ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿ ತೋಡಿನ ಪೊದೆಗೆ ಸಿಲುಕಿ ಬಾಲಕ ಪತ್ತೆಯಾಗಿದ್ದ.  ಕೂಡಲೇ ಬಂದ್ಯೋಡಿನ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಯಿತಾದರೂ ಅದಾಗಲೇ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!