ಕರಾವಳಿಕ್ರೈಂ

ಮಂಗಳೂರು: ಭೀಕರ ರಸ್ತೆ ಅಪಘಾತ, ಯುವ ವೈದ್ಯ ಮೃತ್ಯು

ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಪಲ್ಟಿಯಾದ ಘಟನೆ ನಗರದ ನಂತೂರಿನ ತಾರೆತೋಟ ಬಳಿಯಲ್ಲಿ ನಿನ್ನೆ ರಾತ್ರಿ ನಡೆದಿದ್ದು, ಕಾರು ಚಲಾಯಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಫಿಸಿಯೋಥೆರಪಿ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಮೂಲತಃ ಕೇರಳದ ಆಲಪ್ಪುಝ ನಿವಾಸಿಯಾಗಿದ್ದು, ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಮುಗಿಸಿ ಅಲ್ಲಿಯೇ ಉದ್ಯೋಗಕ್ಕೆ ಸೇರಿದ್ದ ಡಾ.ಮೊಹಮ್ಮದ್ ಅಮಲ್ (29) ಮೃತರು.


ನಂತೂರಿನಿಂದ ಪಂಪ್ವೆಲ್ ಕಡೆಗೆ ತನ್ನ ಕಾರಿನಲ್ಲಿ ತೆರಳುತ್ತಿದ್ದಾಗ ಹೆದ್ದಾರಿ ಪ್ರಾಧಿಕಾರದ ಕಚೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿದ್ದು, ಅತಿ ವೇಗದಿಂದಾಗಿ ಡಿವೈಡರ್ ತಾಗಿ ನಡುವೆ ಹಾಕಿರುವ ಗ್ರಿಲ್ಸ್ ಮೇಲೆ ಹೋಗಿದೆ. ಆನಂತರ ಗ್ರಿಲ್ಸ್ ತಾಗಿಕೊಂಡೇ 2-3 ಪಲ್ಟಿಯಾಗಿ ರಸ್ತೆಯ ಮೇಲೆ ಬಿದ್ದಿದೆ.

ಕಾರು ಚಲಾಯಿಸುತ್ತಿದ್ದ ಡಾ.ಮುಹಮ್ಮದ್ ಅಮಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಇವರ ಜೊತೆಗಿದ್ದ ವಿದ್ಯಾರ್ಥಿನಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!