ಕರಾವಳಿಕ್ರೈಂ

ವಿಟ್ಲ: ಸಹಪಾಠಿ ಜತೆ ಮಾತನಾಡುತ್ತಿದ್ದ ಅಪ್ರಾಪ್ತ ಬಾಲಕನಿಗೆ ಬೆದರಿಕೆ: ಆರೋಪಿ ಪೊಲೀಸ್ ವಶಕ್ಕೆ

ವಿಟ್ಲ: ಅಪ್ರಾಪ್ತ ಬಾಲಕ ವಿಟ್ಲ ಖಾಸಗಿ ಬಸ್‌ ನಿಲ್ದಾಣದಲ್ಲಿ ಆತನ ಶಾಲಾ ಸಹಪಾಠಿಯೊಬ್ಬಳೊಂದಿಗೆ ಮಾತನಾಡುತ್ತಿರುವಾಗ ಅಲ್ಲಿಗೆ ಬಂದು ಬೆದರಿಕೆ ಒಡ್ಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜು.8ರಂದು ನಡೆದಿದೆ.

ಆರೋಪಿ ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನು ಸ್ಥಳಕ್ಕೆ ಬಂದು, ಹಿಂದೂ ಹುಡುಗಿಯೊಂದಿಗೆ ಮಾತನಾಡುತ್ತಿರುವ ಬಗ್ಗೆ ತಕರಾರು‌ ತೆಗೆದು, ಜೀವಬೆದರಿಕೆ ಒಡ್ಡಿ ಹೋಗಿದ್ದು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು ಆತನ ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!