ಕರಾವಳಿಕ್ರೈಂ

ಬೆಳ್ತಂಗಡಿ: ಕಾಡಾನೆ ದಾಳಿ, ವ್ಯಕ್ತಿ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು,  ಓರ್ವ ವ್ಯಕ್ತಿ ಆನೆ ದಾಳಿಗೆ ಬಲಿಯಾದ ಘಟನೆ ಜು. 17 ರಂದು ನಡೆದಿದೆ.

ಸಾಂದರ್ಭಿಕ ಚಿತ್ರ



ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ(60) ಎಂದು ತಿಳಿದುಬಂದಿದೆ.
ಕಾಡಾನೆಯ ಹಿಂಡು ಈ ಪ್ರದೇಶದಲ್ಲಿ ಓಡಾಟ ನಡೆಸಿದ್ದು ಇದನ್ನು ಗಮನಿಸಿದ ಸ್ಥಳೀಯರು ಆನೆಯನ್ನು ಓಡಿಸುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳಿಯ ಗ್ರಾಮ ಪಂಚಾಯತ್ ಅಧಿಕಾರಿಗಳು  ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!