ವಿಟ್ಲ: ಟಿಪ್ಪರ್-ಕಾರು ನಡುವೆ ಭೀಕರ ಅಪಘಾತ, ಕಾರು ಚಾಲಕ ಮೃತ್ಯು
ವಿಟ್ಲ: ಭೀಕರ ಅಪಘಾತದಲ್ಲಿ ನವ ವಿವಾಹಿತರೊಬ್ಬರು ಧಾರಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಮೃತಪಟ್ಟಿದ್ದು ಹಾಗೂ ಆತನ ಸಹೋದರಿ ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ.

ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಸಹೋದರಿ ಮಹಿಳೆ ಹಾಗೂ ಮಗು ಗಂಭೀರ ಗಾಯಗೊಂಡಿ ದ್ದಾರೆ.
ಗಾಯಾಳುಗಳನ್ನು ಅನಂತಾಡಿ ಆಶ್ವತ್ತಡಿ ಮೂಲದದವರೆಂದು ಗುರುತಿಸಲಾಗಿದೆ. ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ನಿನ್ನೆ ತಡರಾತ್ರಿ ಚಾಲಕ ಅನೀಶ್ ಅನಂತಾಡಿ (34) ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಎರಡು ತಿಂಗಳ ಹಿಂದೆ ಮದುವೆಯಾದ ಅನೀಶ್ ಅನಂತಾಡಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.