ರಾಜಕೀಯರಾಜ್ಯ

ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ-ಎಂ.ಟಿ.ಬಿ.ನಾಗರಾಜ್



ವಿಜಯಪುರ: ಬಿಜೆಪಿ ಪಕ್ಷ ನಾನು ಸೇರಿದಂತೆ ಕಾಂಗ್ರೆಸ್‌ ಪಕ್ಷ ತೊರೆದು ಬಂದ ಎಲ್ಲರಿಗೆ ಎಲ್ಲವನ್ನೂ ಕೊಟ್ಟಿದೆ. ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಿದ ಸಂತೃಪ್ತಿ ಇದೆ. ಯಾವುದೇ ಕಾರಣಕ್ಕೂ ನಾವು ಬಿಜೆಪಿ ತೊರೆಯುವುದಿಲ್ಲ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವರಿಷ್ಠರು ಕೊಟ್ಟ ಭರವಸೆ ಈಡೇರಿಸದೇ ಇದ್ದಾಗ ಅತೃಪ್ತಿ ವ್ಯಕ್ತಪಡಿಸಿದ್ದು ನಿಜ. ಈಗ ಬಿಜೆಪಿ ನಮಗೆ ಎಲ್ಲವನ್ನೂ ಕೊಟ್ಟಿದೆ. ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ. ಪಕ್ಷ ಬಿಡುವ ಸಂದರ್ಭ ಬಂದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ತಿಳಿಸಿದರು.

ನಮ್ಮ ಸಮಾಜದ ಮುಖಂಡರು, ಸ್ನೇಹಿತರು ಕಾಂಗ್ರೆಸ್ ಗೆ ಆಹ್ವಾನಿಸಿದ್ದಾರೆ. ನಮ್ಮ ಸ್ನೇಹ ಸಂಬಂಧವೇ ಬೇರೆ, ರಾಜಕಾರಣವೇ ಬೇರೆ. ಸಿದ್ದರಾಮಯ್ಯನವರ ಬಗ್ಗೆ ಈಗಲೂ ಅಭಿಮಾನವಿದೆ. ಅವರಿಗೆ ಮತ್ತೆ ಸಿಎಂ ಆಗುವ ಯೋಗ ಇದ್ದರೆ ಯಾರಿಂದಲೂ ತಪ್ಪಿಸಲು ಆಗದು. ಆದರೆ, ರಾಜಕೀಯವಾಗಿ ನಮ್ಮಿಬ್ಬರ ದಾರಿ ಬೇರೆ ಬೇರೆಯಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!