ಕರಾವಳಿಕ್ರೈಂರಾಷ್ಟ್ರೀಯ

ಬಿಜೈ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ



ಮಂಗಳೂರು: ಸುಮಾರು 10 ವರ್ಷದಿಂದ ತಲೆಮರೆಸಿಕೊಂಡಿದ್ದ ಶೂಟೌಟ್ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೈಯ ಭಾರತಿ ಬಿಲ್ಡರ್ಸ್ ಕಚೇರಿಗೆ ಭೂಗತ ಪಾತಕಿ ರವಿ ಪೂಜಾರಿ ಸಹಚರರು 2014ರಲ್ಲಿ ಶೂಟೌಟ್ ನಡೆಸಿದ್ದರು. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮಹಾ ರಾಷ್ಟ್ರದ ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ಎಂಬಾತನನ್ನು ಉರ್ವ ಪೊಲೀಸರು ಮಹಾರಾಷ್ಟ್ರದ ಪಂಡರಾಪುರ ಎಂಬಲ್ಲಿ ಸೆರೆ ಹಿಡಿದಿದ್ದಾರೆ.

ಈ ಪ್ರಕರಣದ ಆರೋಪಿಯಾಗಿದ್ದ ಕರಾಡ್ ಗಣೇಶ್ 2015ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ 3ನೇ ನ್ಯಾಯಾಲಯ ವಾರಂಟ್ ಹೊರಡಿಸಿತ್ತು.
ಆರೋಪಿಯ ವಿರುದ್ಧಕಾವೂರು ಪೊಲೀಸ್ ಠಾಣೆ, ಮಹಾರಾಷ್ಟ್ರದ ಕರಾಡ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್ ಆಯುಕ್ತ ಸುಧೀರ್ ಕುಮಾರ ರೆಡ್ಡಿ ಮಾರ್ಗದರ್ಶನದಂತೆ ನಡೆದ ಕಾರ್ಯಾಚರಣೆಯಲ್ಲಿ ಉರ್ವ ಠಾಣಾ ನಿರೀಕ್ಷಕರ ನೇತೃತ್ವದ ಎಎಸೈ ವೇಣುಗೋಪಾಲ್, ಹೆಡ್ ಕಾನ್‌ ಸ್ಟೇಬಲ್‌ ಗಳಾದ ಪ್ರಮೋದ್, ನಾರಾಯಣ, ಗೋವಿಂದರಾಜ್ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!