Uncategorizedಕರಾವಳಿ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಭೆ



ಪುತ್ತೂರು: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಭೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅ.7ರಂದು ನಡೆಯಿತು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ.ಎಚ್ ಅಬ್ದುಲ್ ಶಕೂರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಭಾಗವಹಿಸಿ ಪಕ್ಷ ಸಂಘಟನೆ ಬಗ್ಗೆ ಮಾತನಾಡಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ವಿಟ್ಲ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕುರುಂಬಳ, ಹಾರಿಸ್ ಸಂಟ್ಯಾರ್, ಯಾಕೂಬ್ ಕುರಿಯ, ಅಝೀಝ್ ರೆಂಜಲಾಡಿ, ಸೂಫಿ ಕುರಿಯ, ಬಶೀರ್ ಕೌಡಿಚ್ಚಾರ್, ಅಬೂಬಕ್ಕರ್ ಶಾಫಿ ಆರ್ಲಪದವು, ರಝಾಕ್ ಮುಲಾರ್, ಮಹಮ್ಮದ್ ಕುಂಞಿ ಕುಂಜೂರು, ಹಮೀದ್ ಕೊಮ್ಮೆಮ್ಮಾರ್, ಹಬೀಬ್ ತಿಂಗಳಾಡಿ, ಉನೈಸ್ ಗಡಿಯಾರ, ಮೆಲ್ವಿನ್ ಡಿಸೋಜಾ, ಶರೀಫ್ ಬಲ್ನಾಡ್ ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಶರೀಫ್ ಕೊಯಿಲ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಶೀದ್ ಅಮ್ಚಿನಡ್ಕ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!