ರಾಜಕೀಯರಾಜ್ಯ

ನಾನು ಕಾಂಗ್ರೆಸ್ ನಲ್ಲಿ ಉಳೀತೀನೋ? ಆ ಪ್ರಶ್ನೆಗೆ ಮೂರು ವರ್ಷ ಕಾಯೋಣ- ನಯನಾ ಮೋಟಮ್ಮ

ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಜೊತೆ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ  ಕೇಸರಿ ಶಾಲು ಧರಿಸಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ. ನದಿ ಎಂದರೆ ಕಾಂಗ್ರೆಸ್ಸಾ, ದಡ ಎಂದರೆ ಬಿಜೆಪಿಯಾ ಎಂಬ ಶಂಕೆ ಬೇಡ ಎಂದರು. ಹಿಂದೂವಾಗಿ, ದಲಿತೆಯಾಗಿ, ಮಹಿಳೆಯಾಗಿ ಮೂಡಿಗೆರೆಯಲ್ಲಿ ಜನಿಸಿದ್ದೇನೆ. ಹಾಗಾಗಿ ಆ ಒಂದು ಅಸ್ತಿತ್ವದಿಂದ ಇಲ್ಲಿಗೆ ಬಂದಿದ್ದೇನೆ.

ನಾಳೆ ನಾನು ಬಿಜೆಪಿಯಲ್ಲಿ ಬರ್ತೀನೋ, ಕಾಂಗ್ರೆಸ್ಸಿನಲ್ಲಿ ಉಳಿತಿನೋ, ಎಸ್‌ಡಿಪಿಐಗೆ ಹೋಗ್ತಿನೋ ಅಥವಾ ಬಿಎಸ್‌ಪಿಗೆ ಹೋಗ್ತಿನೋ ಆ ಪ್ರಶ್ನೆಗೆ ಉತ್ತರ ಇನ್ನು ಮೂರು ವರ್ಷ ಕಾಯೋಣ, ಆ ಮೇಲೆ ನೋಡೋಣ, ಇವತ್ತು ನಾನು ಕಾಂಗ್ರೆಸ್ ಶಾಸಕಿಯಾಗಿ ಇಲ್ಲಿ ನಿಂತಿದ್ದೇನೆ ಎಂದು ನಯನಾ ಮೋಟಮ್ಮ ಹೇಳಿದರು.





ನಾನು ಗಣಪತಿಗಾಗಿ, ಧರ್ಮಕ್ಕಾಗಿ ಬಂದಿದ್ದೇನೆ. ಶಾಸಕಿಯಾಗಿ ಪಕ್ಷ ಪ್ರತಿನಿಧಿಸುವುದು ಆ ನಂತರ, ಈಗ ಗಣಪತಿ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ಇಲ್ಲಿಗೆ ಬಂದಿದ್ದೇನೆ. ಆದ್ದರಿಂದ ಯಾವ ಪಕ್ಷದವರಿಗೂ ಪ್ರಶ್ನೆಗಳು ಉಳಿಯಬಾರದು ಎಂದು ಅವರು ಹೇಳಿದರು. ನಯನ ಮೋಟಮ್ಮ ಅವರ ಭಾಷಣ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!