ಕರಾವಳಿಕ್ರೈಂ

ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ವಿಟ್ಲ ಠಾಣಾ ಪೊಲೀಸರು



ವಿಟ್ಲ: ಅಕ್ರಮ ಮರಳು ಅಡ್ಡೆಗೆ ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.

ಆ.1ರಂದು ಬಂಟ್ವಾಳ, ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿ  ಅಬ್ದುಲ್‌ ಸಮದ್‌ ಎಂಬಾತ ಹೊಳೆಯಿಂದ ಯಂತ್ರದ ಮೂಲಕ ಮರಳನ್ನು  ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್‌ ಠಾಣಾ ಪೊಲಿಸ್‌ ಉಪ ನಿರೀಕ್ಷಕರಾದ ರತ್ನಕುಮಾರ್‌ ರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದಾಗ, ಕೇರಳ ಗಡಿಭಾಗದಿಂದ ಅಂದಾಜು ಒಂದು ಕಿ.ಮೀ ದೂರದ ಸಾಲೆತ್ತೂರು ಕಟ್ಟತ್ತಿಲ ಹೊಳೆಯ ಸೇತುವೆ ಬಳಿ, ಸುಮಾರು 2 ರಿಂದ 3 ಪಿಕಪ್‌ ನಷ್ಟು ಮರಳು ಮತ್ತು ಹೊಳೆಯಿಂದ ಮರಳನ್ನು ತೆಗೆಯಲು ಉಪಯೋಗಿಸುತ್ತಿದ್ದ ಯಂತ್ರ, ಕಬ್ಬಿನದ ಜಾಲರಿ, ಪೈಬರ್‌ ಬುಟ್ಟಿಗಳು, ಕಬ್ಬಿಣದ ಹಾರೆ ಹಾಗೂ ಕೃತ್ಯಕ್ಕೆ ಬಳಸಿದ ಇತರೆ ಸೊತ್ತುಗಳು ಕಂಡುಬಂದಿದ್ದು, ಸದ್ರಿ ಸೊತ್ತುಗಳನ್ನು ಸ್ವಾಧೀನಪಡಿಸಿ, ವಿಟ್ಲ ಪೊಲೀಸ್‌ ಠಾಣೆಯಲ್ಲಿ ಅಕ್ರ:93/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ‌ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!