ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಗೆ ದಕ್ಕೆಯಾಗುವ ಪೋಸ್ಟ್: ಪ್ರಕರಣ ದಾಖಲು
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42) ಎಂಬವರು ನೀಡಿದ ದೂರಿನಂತೆ, ಸದ್ರಿಯವರು ತನ್ನ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ನ ಕುಲುಮೆ ಎಂಬ ಗ್ರೂಪ್ ನಲ್ಲಿ AyshuAysha ಎಂಬ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಿಭಿನ್ನ ಕೋಮುಗಳ ನಡುವೆ ವೈಮನಸ್ಸು ಉಂಟಾಗುವಂತಹ ಸುಳ್ಳು ವದಂತಿಗಳಿರುವ ವರದಿಯನ್ನು ಪ್ರಸಾರ ಮಾಡಿರುವುದು ಕಂಡು ಬಂದಿರುತ್ತದೆ. ಈ ಬಗ್ಗೆ ಕಲಂದರ್ ಪುತ್ತುಮೋನು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ: 70/2025, ಕಲಂ:353 (1)(b), 353(2) BNS ರಂತೆ ಪ್ರಕರಣ ದಾಖಲಾಗಿದೆ.