ಕರಾವಳಿಕ್ರೈಂ

ಬಿಳಿನೆಲೆ: ಹಿಮ್ಮು ಖವಾಗಿ ಚಲಿಸಿ ಪಲ್ಟಿಯಾದ ಪುತ್ರ ಚಲಾಯಿಸುತ್ತಿದ್ದ ಜೀಪು; ತಂದೆ ಸಾವು



ಕಡಬ: ಜೀಪು ಪಲ್ಟಿಯಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಆ.7ರಂದು ನಡೆದಿದೆ. ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68 ವ.) ಮೃತರು.

ಧರ್ಮಪಾಲ ಅವರು ತನ್ನ ಮಗನೊಂದಿಗೆ ತೋಟಕ್ಕೆ ಹೋಗಿ  ಬಳಿಕ ತಮ್ಮ ಜೀಪಿನಲ್ಲಿ ಮನೆಗೆ ಹಿಂದಿರುಗುವ ವೇಳೆ ಮನೆ ಸಮೀಪ ಮಣ್ಣಿನ ರಸ್ತೆಯಲ್ಲಿ ಜೀಪು ಹತ್ತದೇ ಇದ್ದುದರಿಂದ ಧರ್ಮಪಾಲ ಅವರು ಜೀಪಿನಿಂದ ಇಳಿದು ರಸ್ತೆ ಬದಿ ನಿಂತಿದ್ದ ವೇಳೆ ಘಟನೆ ನಡೆದಿದೆ. ಧರ್ಮಪಾಲರ ಮಗ ದಿನೇಶ್‌ರವರು ಜೀಪನ್ನು ಮೇಲೆ ಹತ್ತಿಸಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಜೀಪು ಒಮ್ಮೆಲೇ ಹಿಮ್ಮುಖ ಚಲಿಸಿ ರಸ್ತೆ ಬದಿ ನಿಂತಿದ್ದ ಧರ್ಮಪಾಲರ ಮೇಲೆ ಮಗುಚಿ ಬಿದ್ದಿದೆ. ಘಟನೆಯಿಂದ ತೀವ್ರ ಗಾಯಗೊಂಡ ಧರ್ಮಪಾಲ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೊದಲೇ ಅವರು ಮೃತರಾಗಿದ್ದಾರೆ.
ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!