ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ
ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜಿರಿಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.



