ರಾಜ್ಯ

ಕಾಂಗ್ರೆಸ್’ನ ಭಾರತ ಜೋಡೋ ಯಾತ್ರೆ ಬಿಜೆಪಿಯ ಮೇಲೆ ಯಾವುದೇ ಪರಿಣಾಮವನ್ನೂ ಬೀರುವುದಿಲ್ಲ: ಯತ್ನಾಳ್



ವಿಜಯಪುರ: ‘ಭಾರತ ಐಕ್ಯತಾ ಯಾತ್ರೆ ಕುರಿತಂತೆ ಟೀಕೆ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರಧಾನಿ ಮೋದಿ ಅವರು ಹೇಳಿದಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು, ಕಾಂಗ್ರೆಸ್ ಮುಖಂಡರನ್ನು ಬೀದಿಗೆ ತಂದಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ. 

ರವಿವಾರ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಡೆಸುತ್ತಿರುವ ಭಾರತ ಐಕ್ಯತಾ ಯಾತ್ರೆ ಬಿಜೆಪಿಯ ಮೇಲೆ ಯಾವುದೇ ಪರಿಣಾಮವನ್ನೂ ಬೀರುವುದಿಲ್ಲ. ಇದರಿಂದ, ಇನ್ನೂ ಒಳ್ಳೆಯದ್ದೇ ಆಗಿದೆ. ಅವರ ಬಣ್ಣ ಬಯಲು ಮಾಡಿದೆ ಎಂದು ವ್ಯಂಗ್ಯವಾಡಿದರು.

ಭ್ರಷ್ಟರೆಲ್ಲರನ್ನು ರಸ್ತೆಗೆ ತರುತ್ತೇವೆಂದು ಪ್ರಧಾನಿ ಮೋದಿ ಅವರು ಮೊದಲೇ ಹೇಳಿದ್ದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾಗಾಂಧಿ ಅವರು ಎಂದಾದರೂ ರಸ್ತೆಯಲ್ಲಿ ನಡೆದಿದ್ದರಾ?. ಈಗ ನೋಡಿ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಇದು ಬಿಜೆಪಿಯ ದೊಡ್ಡ ಸಾಧನೆ ಅಲ್ಲವೇ ಎಂದು ಪ್ರಶ್ನಿಸಿದರು. 

Leave a Reply

Your email address will not be published. Required fields are marked *

error: Content is protected !!