ಭೂಗತ ಪಾತಕಿ ಕಲಿ ಯೋಗೀಶ್ ನ ಸಹಚರ ಶ್ರೀನಿವಾಸ್ ಬಂಧನ
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ. ಕ್ರ 155/ 2017 & ಕೋಕಾ ಪ್ರಕರಣದ ಅರೋಪಿಯಾದ ಭೂಗತ ಪಾತಕಿ ಕಲಿ ಯೋಗೀಶ್ ನ ಸಹಚರ ಶ್ರೀನಿವಾಸ್ @ ಶೀನು(45) ಎಂಬಾತ ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಈತನ ವಿರುದ್ದ ಪ್ರಿನ್ಸಿಪಲ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೈಸೂರು ರವರು ವಾರೆಂಟ್ ಹಾಗೂ ಉದ್ಘೂಷಣೆಯನ್ನು ಹೊರಡಿಸಿತ್ತು.

ಆರೋಪಿ ಪತ್ತೆ ಕಾರ್ಯಕ್ಕೆ ಶ್ರೀಕಾಂತ್ (ಸಹಾಯಕ ಪೊಲೀಸ್ ಅಯುಕ್ತರು ಮಂಗಳೂರು ಉತ್ತರ ಉಪವಿಭಾಗ, ಪಣಂಬೂರು)ರವರ ಮಾರ್ಗದರ್ಶನದಲ್ಲಿ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಂಜುನಾಥ ಬಿ ಎಸ್, ಪೊಲೀಸ್ ಉಪ ನಿರೀಕ್ಷಕರಾದ ಉಮೇಶ್ ಕುಮಾರ್. M. N ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ.ಎಸ್.ಐ ಸುರೇಶ್ ಕುಂದರ್, ಹೆಡ್ ಕಾನ್ಸ್ಟೇಬಲ್ ಉದಯರವರ ತಂಡವನ್ನು ರಚಿಸಿ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು ಆರೋಪಿ ಮುಂಬಯಿಯಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಅ.4ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.