ಸಮೀಕ್ಷೆ ವೇಳೆ ಸಾವನ್ನಪ್ಪಿದ ಮೂವರ ಕುಟುಂಬಕ್ಕೆ ಪರಿಹಾರ ಘೋಷಿಸಿದಸರಕಾರ
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುವ ವೇಳೆ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
1.20 ಲಕ್ಷ ಶಿಕ್ಷಕರು, ಬೇರೆ 40 ಸಾವಿರ ಸಿಬ್ಬಂದಿ ಗಣತಿಯಲ್ಲಿ ಭಾಗಿಯಾಗಿದ್ದಾರೆ. ಶಿಕ್ಷಕರಿಗೆ ಇತರೆ ಸರ್ವೆಯವರಿಗೆ 20 ಸಾವಿರ ರೂ. ಗೌರವ ಧನ ನೀಡಲಾಗುತ್ತದೆ. ಪ್ರತಿ ಮನೆಗೆ 100 ರೂ. ಕೊಡುತ್ತೇವೆ. ಲಮ್ ಸಮ್ 5 ಸಾವಿರ ರೂ. ಕೊಟ್ಟಿದ್ದೇವೆ ಅಲ್ಲಿಗೆ 20 ಸಾವಿರ ರೂ. ಆಗುತ್ತೆ. 19ರ ಒಳಗೆ ಪೂರ್ಣ ಪ್ರಮಾಣದಲ್ಲಿ ಸರ್ವೆ ಮುಗಿಯಲಿದೆ ಎಂದು ಸಿಎಂ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್. ನಾಯಕ್, ಸಿಎಸ್ ಶಾಲಿನಿ ರಜನೀಶ್ ಮತ್ತಿತರರು ಇದ್ದರು.