ಕರಾವಳಿಕ್ರೈಂ

ಉಪ್ಪಿನಂಗಡಿ: ಹಾಡಹಗಲೇ ಅಂಗಡಿಯಿಂದ ಲಕ್ಷಾಂತರ ರೂ. ನಗದು ಕಳವು

ಉಪ್ಪಿನಂಗಡಿ: ಹಾಡಹಗಲೇ ಅಂಗಡಿಯಿಂದ ಲಕ್ಷಾಂತರ ರೂ. ನಗದು ಕಳ್ಳತನ ಆದ ಘಟನೆ ಅ.27ರಂದು ಮಧ್ಯಾಹ್ನ ಉಪ್ಪಿನಂಗಡಿ ಗಾಂಧಿಪಾರ್ಕ್ ಬಳಿ ನಡೆದಿದೆ.
ಇಲ್ಲಿನ ಶ್ರೀ ರಾಮಗೋಪಾಲ್ ಕಾಮತ್ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮತ್ತು ಕಾಡುತ್ಪತ್ತಿ ವ್ಯಾಪಾರ ಕೇಂದ್ರವಾದ ‘ಗುಂಡಿಜೆ ಟ್ರೇಡರ್ಸ್’ನಲ್ಲಿ ಈ ಘಟನೆ ನಡೆದಿದೆ.

ಮಧ್ಯಾಹ್ನ 12ರ ಸುಮಾರಿಗೆ ಅಂಗಡಿ ಮಾಲಕ ಕೊಯಿಲ ಗ್ರಾಮದ ವಳಕಡಮ ನಿವಾಸಿ ವಸಂತ ಗುಂಡಿಜೆಯವರು ವಾಣಿಜ್ಯ ಸಂಕೀರ್ಣದ ಹಿಂಬದಿಯಲ್ಲಿರುವ ಶೌಚಾಲಯಕ್ಕೆ ತೆರಳಿದ್ದರು. ಈ ವೇಳೆ ಅಂಗಡಿಯ ಶಟರ್ ತೆರದಿಟ್ಟು, ಕ್ಯಾಶ್ ಡ್ರಾಯರ್‌ಗೆ ಬೀಗ ಹಾಕಿದ್ದರು. ವಾಪಸ್ ಬಂದಾಗ ಕ್ಯಾಶ್ ಡ್ರಾಯರ್‌ನಲ್ಲಿದ್ದ ಐದು ಲಕ್ಷ ರೂ.ಗಳನ್ನು ಎಗರಿಸಿರುವುದು ಅವರ ಗಮನಕ್ಕೆ ಬಂದಿದ್ದು, ಈ ವೇಳೆ ಅಂಗಡಿಯೊಳನ ಸಿಸಿಟಿವಿ ಕ್ಯಾಮರಾ ಆಫ್ ಆಗಿತ್ತೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಕೆಲವು ದಿನಗಳಿಂದ ಅಂಗಡಿ ಮಾಲಕನನ್ನು ಹಿಂಬಾಲಿಸಿ ಇವರ ಚಲನವಲನಗಳನ್ನು ಗಮನಿಸಿದ ವ್ಯಕ್ತಿಯೇ ಈ ಕೃತ್ಯ ನಡೆಸಿರಬಹುದಾದ ಶಂಕೆ ವ್ಯಕ್ತವಾಗಿದೆ. ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸ್ಥಳಕ್ಕೆ ಪುತ್ತೂರು ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಅರುಣ್ ನಾಗೇಗೌಡ, ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಅವಿನಾಶ್, ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!