ಮಾದಕ ದ್ರವ್ಯ ಸೇವನೆ-ವಶಕ್ಕೆ
ಪುತ್ತೂರು:ಮಾದಕ ದ್ರವ್ಯ ಸೇವನೆ ಮಾಡಿದ ವ್ಯಕ್ತಿಯನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.

ಕೆಮ್ಮಿಂಜೆ ಮರೀಲ್ ನಿವಾಸಿ ಮುಹಮ್ಮದ್ ಅನೀಶ್ (29ವ.)ಆರೋಪಿಯಾಗಿದ್ದು ಪೊಲೀಸರು ಮಹಮ್ಮದ್ ಅನೀಶ್ನನ್ನು ವಶಕ್ಕೆ ಪಡೆದುಕೊಂಡು ಪುತ್ತೂರು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




