ಕರಾವಳಿ

ದ್ವೇಷ ಭಾಷಣ ಪ್ರಕರಣ: ಕಲ್ಲಡಪ್ರಭಾಕರ ಭಟ್‌ಗೆ ಜಾಮೀನು


ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಭಾಷಣ ಮಾಡಿರುವ ಆರೋಪದಡಿ ಕಲ್ಲಡ್ಕ ಪ್ರಭಾಕರಭಟ್ ವಿರುದ್ಧ ದೂರು ದಾಖಲಾದ ಪ್ರಕರಣಕ್ಕೆ ಸುಬಂಧಿಸಿದಂತೆ ನ್ಯಾಯಾಲಯ ಬುಧವಾರ ಜಾಮೀನು ಮಂಜೂರುಗೊಳಿಸಿದೆ.
ಜಾಮೀನು ಕೋರಿ ಪ್ರಭಾಕರ ಭಟ್ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ.


ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ನಡೆದ ದೀಪೋತ್ಸವ ಮತ್ತು ಗೋಪೂಜೆಯಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ ಭಟ್ ಕೋಮು ಪ್ರಚೋದನಾತ್ಮಕವಾಗಿ ಭಾಷಣ ಮಾಡಿರುವ ಬಗ್ಗೆ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮನೆಗೆ ನೋಟಿಸ್ ಜಾರಿಗೊಳಿಸಿದ್ದರು. ಬಳಿಕದ ಬೆಳವಣಿಗೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ.27ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ ನೀಡಿ ಪೂರ್ಣ ವಿಚಾರಣೆಯನ್ನು ಆ.29ಕ್ಕೆ ಮುಂದೂಡಿತ್ತು ಅ.29ರಂದು ದೂರುದಾರೆ ಈಶ್ವರಿ ಪದ್ಮುಂಜ ಪರ ವಕೀಲರು ಪುತ್ತೂರು ಹೆಚ್ಚುವರಿ ಮತ್ತು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಬಿಎನ್ ಎಸ್ ಎಸ್ ಸೆಕ್ಷನ್ 338, 339 ಅಡಿ ವಾದ ಮಂಡಿಸಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಅಂದು ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಹಲವು ಬಾರಿ ಮುಂದೂಡಿತ್ತು ಇದೀಗ ನ್ಯಾಯಾಲಯ ಜಾಮೀನು ನೀಡಿದೆ. ಪ್ರಭಾಕರ ಭಟ್ ಪರವಾಗಿ ಪುತ್ತೂರಿನ ವಕೀಲ ಮಹೇಶ್ ಕಜೆ ವಾದಿಸಿದ್ದರು.

Leave a Reply

Your email address will not be published. Required fields are marked *

error: Content is protected !!