ಹಿಜಾಬ್ ಕುರಿತ ಸುಪ್ರೀಂ ಕೋರ್ಟ್ ವಿಭಿನ್ನ ತೀರ್ಪು, ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ
ನವದೆಹಲಿ; ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆದು ಇಂದು ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿದೆ.
ನ್ಯಾ.ಹೇಮಂತ್ ಗುಪ್ತಾ, ಸುಧಾಂಶು ಧುಲಿಯಾ ಪೀಠ ತೀರ್ಪು ವಿಭಿನ್ನ ಅಭಿಪ್ರಾಯ ವ್ಯಕ್ತವಾಗಿದೆ.
ನ್ಯಾ.ಹೇಮಂತ್ ಗುಪ್ತಾ, ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಜಾ ಮಾಡಿದ್ದಾರೆ. ಇನ್ನು ಹೈಕೋರ್ಟ್ ತೀರ್ಪುನ್ನು ನ್ಯಾ. ಸುಧಾಂಶು ಧುಲಿಯಾ ರದ್ದು ಪಡಿಸಿದ್ದಾರೆ. ಸದ್ಯ ಹೈಕೋರ್ಟ್ ತೀರ್ಪು ಯಥಾಸ್ಥಿತಿ ಮುಂದುವರಿಯಲಿದೆ.
ಇದರಿಂದಾಗಿ ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.