Uncategorizedಜಿಲ್ಲೆ

ಉಡುಪಿ: ದುರ್ಗಾ ದೌಡ್ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ, ಪ್ರಚೋದನಾಕಾರಿ ಭಾಷಣ: ಪ್ರಕರಣ ದಾಖಲು



ಉಡುಪಿ: ದುರ್ಗಾ ದೌಡ್ ಮೆರವಣಿಗೆಯಲ್ಲಿ ತಲವಾರು ಪ್ರದರ್ಶಿಸಿದ ಪ್ರಕರಣದ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಉಡುಪಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಉಡುಪಿಯಲ್ಲಿ ಅ.2ರಂದು ದುರ್ಗಾ ದೌಡ್ ಮೆರವಣಿಗೆ ನಡೆದಿತ್ತು. ಇದರಲ್ಲಿ ತಲವಾರು ಪ್ರದರ್ಶನ ಮಾಡಲಾಗಿತ್ತು. ಮಾತ್ರವಲ್ಲ ಸಾರ್ವಜನಿಕ ಸಭೆಯಲ್ಲಿ ಸಂಘಪರಿವಾರದ ಮುಖಂಡರು ಪ್ರಚೋದನಕಾರಿ ಭಾಷಣ ಮಾಡಿದ್ದರು. ಇದರ ವಿರುದ್ಧ ಜಿಲ್ಲೆಯಲ್ಲಿ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಮಾತ್ರವಲ್ಲ ಪ್ರಕರಣ ದಾಖಲಿಸಲು ಒತ್ತಾಯಿಸಿದ್ದವು. ಇದೀಗ ಉಡುಪಿ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!