ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ವತಿಯಿಂದ ಮುಹಮ್ಮದ್ ಕುಕ್ಕುವಳ್ಳಿಯವರಿಗೆ ಸನ್ಮಾನ
ಪುತ್ತೂರು: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಭಾರತ ಸೇವಾ ರತ್ನ ಪ್ರಶಸ್ತಿ ಪಡೆದಿರುವ ಮುಹಮ್ಮದ್ ಕುಕ್ಕುವಳ್ಳಿಯವರಿಗೆ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಗವರ್ನರ್ ಅರವಿಂದ ಶೆಟ್ಟಿ ಕುಡ್ಪಿ, ಪಿಆರ್ಓ ಸುದರ್ಶನ್ ಪಡಿಯಾರ್, ಆರ್ಸಿ ಆನಂದ ರೈ, ಝಡ್ಸಿ ಜೆಸಿಂತಾ ಮಸ್ಕರೇನ್ಹಸ್, ಜಗನ್ನಾಥ ರೈ ಗುತ್ತು, ಪುತ್ತೂರ್ದ ಮುತ್ತು ಅಧ್ಯಕ್ಷೆ ವೇದಾವತಿ ರಾಜೇಶ್, ಲಯನ್ಸ್ ಕ್ಲಬ್ ಆಲಂಕಾರು ದುರ್ಗಾಂಬಾ ಅಧ್ಯಕ್ಷ ಪದ್ಮಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು.




