ಇರಾನ್ ಪರಮೋಚ್ಛ ನಾಯಕ ಆಯತುಲ್ಲಾ ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ
ಶಿವಮೊಗ್ಗ: ಇರಾನ್ ನ ಪರಮೋಚ್ಛ ನಾಯಕ ಆಯತೊಲ್ಲಾ ಖಮೇನಿ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದ್ವಂದ ನೀತಿಯ ವಿರುದ್ಧ ಕಿಡಿಕಾರಿದ್ದಾರೆ.

ಖಮೇನಿ ಸಾವು ಖಂಡನೀಯವಾದದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದೆಡೆ ಶಾಂತಿ ಮಂತ್ರ ಹೇಳುತ್ತಾ ಮತ್ತೊಂದೆಡೆ ಯುದ್ಧ ಮಾಡುತ್ತಿದ್ದಾರೆ. ಹೀಗೆ ದ್ವಂದ ನೀತಿ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಈ ಯುದ್ಧ ಅಗತ್ಯ ಇರಲಿಲ್ಲ ಎಂದರು.





