ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ
ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.

ದಾವಣಗೆರೆ ದಕ್ಷಿಣ ಉಪ ಚುನಾವಣೆಯ
ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ನಲ್ಲಿ ಕ್ರಮ ಕೈಗೊಳ್ಳಲಾಗಿದ್ದು,
ಈ ಕುರಿತು ಎ.13ರಂದು ಹೊರಡಿಸಲಾದ ಆದೇಶದಲ್ಲಿ, 2023ರ ಜೂನ್ 1ರಂದು ನೀಡಿದ್ದ ನೇಮಕಾತಿ ಆದೇಶವನ್ನು ತಕ್ಷಣದಿಂದಲೇ ಹಿಂಪಡೆಯಲಾಗಿದೆ ಎಂದು ತಿಳಿಸಲಾಗಿದೆ.
ನಸೀರ್ ಅಹ್ಮದ್ ಅವರ ಮೇಲೆ ಕ್ರಮ ಕೈಗೊಂಡ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.



