ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಬ್ದುಲ್ ಜಬ್ಬಾರ್ ಅಮಾನತು
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.

ಆಂತರಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.



