ರಾಜ್ಯ

ಹಾಸನ: ಭೀಕರ ಸರಣಿ ಅಪಘಾತ: ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ದುರ್ಮರಣ



ಹಾಸನ: ಅರಸೀಕೆರೆ ತಾಲೂಕು ಗಾಂಧಿನಗರ ಗ್ರಾಮದ ಸಮೀಪ ಸರಣಿ ಅಪಘಾತ ಸಂಭವಿಸಿ ನಾಲ್ವರು ಮಕ್ಕಳು ಸೇರಿದಂತೆ 9 ಜನರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಸಾರಿಗೆ ಬಸ್, ಟೆಂಪೋ ಟ್ರಾವೆಲರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. 

ಸರ್ಕಾರಿ ಬಸ್ ಮತ್ತು ಟ್ಯಾಂಕರ್ ನಡುವೆ ಸಿಲುಕಿದ ಟೆಂಪೋ ಟ್ರಾವೆಲರ್ ನಜ್ಜು ಗುಜ್ಜಾಗಿದ್ದು,  ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರೆಲ್ಲರೂ ಅರಸೀಕೆರೆ ತಾಲೂಕಿನ ಬಾಣವಾರ ಗ್ರಾಮದವರು ಎನ್ನಲಾಗಿದೆ.

ಟೆಂಪೋ ಟ್ರಾವೆಲರ್ ನಲ್ಲಿದ್ದವರು ಧರ್ಮಸ್ಥಳಕ್ಕೆ ಹೋಗಿ ಬಾಣವಾರ ಗ್ರಾಮದ ತಮ್ಮೂರಿಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. 

ಮೃತದೇಹವನ್ನು ಅರಸೀಕೆರೆ ಗ್ರಾಮದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳನ್ನು ಹಾಸನದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!