ರಾಜ್ಯ

ಹಾಸನ: ಭೀಕರ ಅಪಘಾತದಲ್ಲಿ ಮೃತಪಟ್ಟ ಒಂಬತ್ತು ಜನರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ



ಬೆಂಗಳೂರು: ಹಾಸನದ ಅರಸೀಕೆರೆ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಒಂಬತ್ತು ಜನರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.


ಅಪಘಾತದಲ್ಲಿ ಗಂಭೀರ ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡಲು ಸ್ಥಳೀಯ ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅ. 15ರಂದು ಮಧ್ಯರಾತ್ರಿ ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ ಶಿವಮೊಗ್ಗ-ಬೆಂಗಳೂರು ಮಾರ್ಗದ ರಸ್ತೆಯಲ್ಲಿ ಬಸ್‌, ಹಾಲಿನ ಟ್ಯಾಂಕರ್‌ ಮತ್ತು ಟೆಂಪೊ ಟ್ರಾವೆಲರ್‌ ನಡುವೆ ಅಪಘಾತ ಸಂಭವಿಸಿದೆ.

ಟೆಂಪೊ ಟ್ರಾವೆಲರ್‌ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಜನರು ಮೃತಪಟ್ಟಿದ್ದಾರೆ. ಉಳಿದ ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಐವರಿಗೆ ಗಾಯಗಳಾಗಿವೆ

Leave a Reply

Your email address will not be published. Required fields are marked *

error: Content is protected !!