ಪುರುಷರಕಟ್ಟೆ ಪ್ರಕರಣ: ಇಂದು ಯುವತಿಯ ಮನೆಗೆ ಬಿಜೆಪಿ ಮುಖಂಡರ ಭೇಟಿ
ಪುತ್ತೂರು: ಪುರುಷರಕಟ್ಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮನೆಗೆ ಭಾರತೀಯ ಜನತಾ ಪಾರ್ಟಿಯ ನಾಯಕರ ತಂಡ ಜು.10ರಂದು ಸಂಜೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಬಿಜೆಪಿ ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಪಕ್ಷದ ಪ್ರಮುಖರು ಯುವತಿಯ ಕುಟುಂಬವನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.




