ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಬಂಧನ ಖಂಡನೀಯ: ಎಸ್ಡಿಪಿಐ
ಅನಧಿಕೃತ ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಲು ಆಗ್ರಹಿಸಿ ಇಂದು ಸುರತ್ಕಲ್ ಟೋಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ ಘಟನೆಯನ್ನು ಎಸ್.ಡಿ.ಪಿ.ಐ ಖಂಡಿಸಿದೆ.
ಬಿಜೆಪಿ ಸರಕಾರದ ವಿರುದ್ಧ ಯಾರು ಧ್ವನಿಯೆತ್ತುತ್ತಾರೋ ಅಂತಹ ಹೋರಾಟಗಾರರನ್ನು ಸುಳ್ಳು ಪ್ರಕರಣಗಳನ್ನು ಹಾಕಿ ಬಂಧಿಸುವಂತಹ ಹೇಡಿತನದ ಪ್ರವೃತ್ತಿ ನಿರಂತರವಾಗಿ ನಡೆಯುತ್ತಲೇ ಇದೆ. ಟೋಲ್ ವಿರೋಧಿ ಹೋರಾಟಗಾರರ ಬಂಧನ ಅದರ ಮುಂದುವರಿದ ಭಾಗವಾಗಿದೆ ಎಂದು
ಎಸ್ ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಅನ್ವರ್ ಸಾದಾತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.