ಪೋಷಕರಿಂದಲೇ 100 ರೂ ದೇಣಿಗೆ ಸಂಗ್ರಹಕ್ಕೆ ಬಾರೀ ವಿರೋಧ: ಸುತ್ತೋಲೆ ವಾಪಸ್ ಪಡೆದ ಸರಕಾರ
ಬೆಂಗಳೂರು: ಶಾಲೆಯಲ್ಲಿ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿದ್ಯಾರ್ಥಿಗಳ ಪೋಷಕರಿಂದಲೇ ಮಾಸಿಕ 100 ರೂ.ಗಳನ್ನು ದೇಣಿಗೆ ಸಂಗ್ರಹಿಸಲು ಸುತ್ತೋಲೆ ಹೊರಡಿಸಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇದೀಗ ಭಾರೀ ವಿರೊಧದ ಬಳಿಕ ವಾಪಸ್ ಪಡೆದುಕೊಂಡಿದೆ.
![](http://newsbites.in/wp-content/uploads/2022/10/IMG_20221021_170804.jpg)
ವಿದ್ಯಾರ್ಥಿಗಳ ಪೋಷಕರಿಂದ ದೇಣಿಗೆ ರೂಪದಲ್ಲಿ ಮಾಸಿಕ ಸುಮಾರು 100 ರೂ.ನಂತೆ ಹಣವನ್ನು ಸಂಗ್ರಹಿಸಿ ಈ ಹಣವನ್ನು ನಿಗದಿತ ಎಸ್ಡಿಎಂಸಿ ಖಾತೆಗೆ ಸಂದಾಯ ಮಾಡಲು ಕ್ರಮವಹಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿತ್ತು.
ಈ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ವಿರೊಧ ವ್ಯಕ್ತಪಡಸಿದ್ದು, ಆದೇಶ ವಾಪಸ್ ಗೆ ಒತ್ತಾಯಿಸಿದ್ದರು.
ಇದೀಗ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ಸೂಚನೆ ಮೇರೆಗೆ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹಿಂಪಡೆದಿದ್ದಾರೆ.