Uncategorizedಕರಾವಳಿ

ಕಾಣಿಯೂರು ಪ್ರಕರಣ: ಮಹಿಳೆ ಮನೆಗೆ ಸಚಿವ ಅಂಗಾರ  ಭೇಟಿ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ



ಪುತ್ತೂರು: ಕಾಣಿಯೂರು ಸಮೀಪದ ದೋಳ್ಪಾಡಿಯಲ್ಲಿ ಬೆಡ್ ಶೀಟ್ ವ್ಯಾಪಾರಿಗಳಿಬ್ಬರು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದು ಅವರಿಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವ, ಸುಳ್ಯ ಶಾಸಕ ಎಸ್ ಅಂಗಾರ ತಿಳಿಸಿದ್ದಾರೆ.

ಅ.೨೩ರಂದು ಘಟನೆ ನಡೆದಿದೆ ಎನ್ನಲಾದ ಮಹಿಳೆಯ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಹಿಳೆಯ ಮೇಲಿನ ಮಾನಭಂಗ ಯತ್ನ ಪ್ರಕರಣವನ್ನು ಮರೆಮಾಚುವ ಉದ್ದೇಶದಿಂದ ಪ್ರಕರಣವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ನಡೆದಿದೆ. ವ್ಯಾಪಾರಿಗಳ ಪರವಾಗಿ ಕೆಲವರು ಮಾತನಾಡುತ್ತಿದ್ದು ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಮಾನಭಂಗ ಯತ್ನಕ್ಕೊಳಗಾದ ಮಹಿಳೆಗೆ ರಕ್ಷಣೆ ನೀಡುವುದರ ಜೊತೆಗೆ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಒತ್ತಾಯಿಸುವುದಾಗಿ ಅವರು ಹೇಳಿದರು. ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿ ಜೊತೆಗಿದ್ದರು.

Leave a Reply

Your email address will not be published. Required fields are marked *

error: Content is protected !!