ಕರಾವಳಿ

ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ- ಸರಕಾರದ ತಾರತಮ್ಯ ಧೋರಣೆ ಖಂಡಿಸಿ ಅ. 29 ರಂದು ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ -ಟಿ.ಎಂ.ಶಹೀದ್ ತೆಕ್ಕಿಲ್



ರಾಜ್ಯದಲ್ಲಿ ಮುಸ್ಲಿಂ ಸಮುದಾಯವನ್ನು ದಮನಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ಮೇಲೆ ನಿರಂತರ ಧಾಳಿಗಳಾಗುತ್ತಿದೆ. ಇದಕ್ಕೆ ಸರಕಾರ ಕೂಡ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಇದರ ವಿರುದ್ದವಾಗಿ ಅ. 29 ರಂದು ಸುಳ್ಯ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರಾಜ್ಯ ಮುಸ್ಲಿಂ ಯೂತ್ ಕೌನ್ಸಿಲ್‌ನ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದ್ದಾರೆ.

ಸುಳ್ಯದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚಾಗುತ್ತಿದೆ. ಕಡಬದ ಕಾಣಿಯೂರಿನಲ್ಲಿ ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಘಟನೆ ಖಂಡನೀಯ. ಅವರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆ ಇದೆ. ತಾಲಿಬಾನ್ ಸಂಸ್ಕೃತಿಯ ರೀತಿ ನೈತಿಕ ಪೊಲೀಸ್‌ಗಿರಿ ಮಾಡುವುದು ಸರಿಯಲ್ಲ. ಎಂದರು.

ಎರಡು ಧರ್ಮಗಳಲ್ಲಿ ಕೆಲವು ಕಿಡಿಗೇಡಿಗಳಿದ್ದಾರೆ. ಸಮಾಜದ ಸ್ವಾಸ್ತ್ಯ ಕೆಡವುತ್ತಿದ್ದಾರೆ. ಇದರಿಂದ ಈ ಸಮಾಜದ ಹೆಸರು ಕೆಡುತ್ತಿದೆ. ಸರಕಾರ ಕೂಡ ಮುಸ್ಲಿಂ ಸಮುದಾಯವನ್ನು ಕಡೆಗಣಿಸುತ್ತಿದೆ. ರಾಜ್ಯದಲ್ಲಿ ಹತ್ಯೆಯಾದ ಅಲ್ಪಸಂಖ್ಯಾತ ಸಮುದಾಯದವರಿಗೆ ಪರಿಹಾರ ನೀಡಿಲ್ಲ. ಮಾನವ ಧರ್ಮ ಕಾಪಾಡಲು ಸರಕಾರ ವಿಫಲವಾಗಿದೆ. ಇಂತಹ ಪ್ರಕರಣಗಳನ್ನು ತಡೆಗಟ್ಟಲು ಗಡಿ ಭಾಗಗಳಲ್ಲಿ ಪೊಲೀಸ್ ಇಲಾಖೆ ಸಿಸಿಟಿವಿಗಳನ್ನು ಅಳವಡಿಸಬೇಕು. ಇದಕ್ಕೆ ಇಲಾಖೆ ಕೂಡಲೇ ಕಾರ್ಯಪ್ರವೃತ್ತವಾಗಬೇಕು. ಅಲ್ಲದೇ ರಾಜ್ಯ ಸರಕಾರ ಮುಸ್ಲಿಂ ಸಮುದಾಯದ ಪ್ರಾಶಸ್ಯ ಕಸಿಯುತ್ತಿದೆ.
ಅಲ್ಪಸಂಖ್ಯಾತ ಸಮುದಾಯದ ಮೀಸಲಾತಿ ಕಡಿತ ಮಾಡಲು ಸರಕಾರ ಹೊರಟಿದೆ. ಇದರ ವಿರುದ್ದವು ಹೋರಾಟ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಂಪಾಜೆ ಗ್ರಾ.ಪಂ. ಸದಸ್ಯ ಅಬ್ಬುಸಾಲಿ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೊ, ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷ ಹನೀಫ್ ಬೀಜಕೊಚ್ಚಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!