ಸುಳ್ಯ: ಹತ್ತು ದಿನದ ಮಗುವನ್ನು ಬಾವಿಗೆ ಎಸೆದು ಕೊಂದ ತಾಯಿ
ಸುಳ್ಯ:ಪಂಜ ಸಮೀಪದ ಕೂತ್ಕುಂಜ ಗ್ರಾಮದ
ಬಸ್ತಿಕಾಡು ಎಂಬಲ್ಲಿ ಹೆತ್ತ ತಾಯಿಯೇ ತನ್ನ ಕರುಳಿನ ಕುಡಿ ಹತ್ತು ದಿನದ ಮಗುವನ್ನು ಬಾವಿಗೆ ಎಸೆದು ಕೊಂದು ಹಾಕಿದ ಹೃದಯ ವಿದ್ರಾಯಕ ಘಟನೆ ಇಂದು ವರದಿಯಾಗಿದೆ.
ತನ್ನ ಕರುಳಿನ ಬಳ್ಳಿಯಾದ ಮಗುವನ್ನು ಬಾವಿಗೆ ಎಸೆದ ತಾಯಿ ಪವಿತ್ರ ಎಂದು ಗುರುತಿಸಲಾಗಿದೆ.ಆಕೆ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇತ್ತೀಚೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಇಂದು ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮಗುವನ್ನು ತಮ್ಮ ಮನೆಯ ಪಕ್ಕದಲ್ಲಿರುವ ಬಾವಿಗೆ ಎಸೆದಿದ್ದು ಘಟನೆಯ ಮಾಹಿತಿ ತಿಳಿದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮಗುವಿನ ಮೃತ ದೇಹವನ್ನು ಆಸ್ಪತ್ರೆಗೆ ಕೊಂಡೊಯಿದಿದ್ದಾರೆ ಎಂದು ತಿಳಿದುಬಂದಿದೆ.