ಕರಾವಳಿ

ವಿಟ್ಲ: ಕಳ್ಳತನ ಪ್ರಕರಣದ ಖತರ್ನಾಕ್ ಖದೀಮ ಅರೆಸ್ಟ್



ವಿಟ್ಲ: ಬಂಟ್ವಾಳ ತಾಲೂಕು ಇಡಿದು ಗ್ರಾಮದ ಮಿತ್ತೂರು ಎಂಬಲ್ಲಿ ಮನೆಯಲ್ಲಿ ಮಲಗಿದ್ದ ವೇಳೆ 107 ಗ್ರಾಂ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ರಾಜ್ಯದ ಖತರ್ನಾಕ್ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಣ್ಣೂರಿನ ಮಹಮ್ಮದ್ ಕೆ ಯು(42.ವ) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ವಿಚಾರಿಸಿದಾಗ ಕಳ್ಳತನವಾದ ಸ್ವತ್ತುಗಳನ್ನು ಕಾಸರಗೋಡಿನಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ಅದರಂತೆ ಕಳವು ಮಾಡಿದ ಮಾಲನ್ನು ಕಾಸರಗೂಡಿನ ಜುವೆಲ್ಲರಿ ಅಂಗಡಿಯಿಂದ ಸುಮಾರು 80.10 ಗ್ರಾಂ ನಷ್ಟು ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಅಂದಾಜು ಮೌಲ್ಯ 3,71,600/-ರೂಪಾಯಿ ಎಂದು ತಿಳಿದು ಬಂದಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಸದ್ರಿ ಕಳ್ಳತನ ಪ್ರಕರಣ ದಾಖಲಾದ ಕೂಡಲೇ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನವಣೆ ಐಪಿಎಸ್ ದ.ಕ ಜಿಲ್ಲೆ, ಹೆಚ್ಚುವರಿ ಜಿಲಾ ಪೊಲೀಸ್‌ ಅಧೀಕ್ಷಕ ಕುಮಾರ ಚಂದ್ರ ಹಾಗೂ ಪ್ರತಾಪಸಿಂಗ್‌ ತೋರಟ್‌ ಡಿವೈಎಸ್‌ಪಿ ಬಂಟ್ವಾಳ ಉಪವಿಭಾರವರ ಮಾರ್ಗದರ್ಶನದಲ್ಲಿ ವಿಟ್ಲದ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ನಾಗರಾಜ್ ಹೆಚ್ ಇ ಇವರ ನೇತೃತ್ವದಲ್ಲಿ ಠಾಣಾ ಪಿಎಸ್ ಐ ಸಂದೀಪ್ ಕುಮಾರ್ ಶೆಟ್ಟಿ ಪಿಎಸ್ ಐ (ಕಾಮತ್ತುಸು), ರುಕ್ಮಾ ನಾಯ್ಕ್‌ ಪಿಎಸ್‌ಐ (ತನಿಖೆ-1) ಹಾಗೂ ಸಿಬ್ಬಂದಿಗಳು ಪತ್ತೆಗೆ ಪ್ರಮುಖ ಪಾತ್ರ ವಹಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!