ರಾಜ್ಯ

ಬೆಳಗಾವಿ ಪ್ರವೇಶಿಸಲು ಯತ್ನ: ಶಿವಸೇನೆಯ ಕಾರ್ಯಕರ್ತರನ್ನು ತಡೆದ ಪೊಲೀಸರು



ಕನ್ನಡ ರಾಜ್ಯೋತ್ಸವ ದಿನವಾದ ನ.1ರಂದು ಬೆಳಗಾವಿ ಪ್ರವೇಶಿಸಲು ಯತ್ನಿಸಿದ ಮಹಾರಾಷ್ಟ್ರದ ಶಿವಸೇನೆಯ ಕಾರ್ಯಕರ್ತರನ್ನು ಸೋಮವಾರ ಕೊಗನೊಳಿ ಚೆಕ್ ಪೋಸ್ಟ್ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದ ಪೊಲೀಸರು ಬಳಿಕ ಅವರನ್ನು ವಾಪಾಸ್ ಕಳುಹಿಸಿದ್ದಾರೆ.


ರಾಜ್ಯ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಶಿವಸೇನೆಯ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ ದೇವಣೆ ಮತ್ತು ಕಾರ್ಯಕರ್ತರನ್ನು ಗಡಿಯಲ್ಲಿಯೇ ಪೊಲೀಸರು ತಡೆದರು.

ಕೂಡಲೇ ಶಿವಸೇನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಕುಳಿತುಕೊಂಡರು. 

Leave a Reply

Your email address will not be published. Required fields are marked *

error: Content is protected !!