ಹಾಸ್ಟೆಲ್’ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಅರಕಲಗೂಡು: ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಕಲಗೂಡು ತಾಲೂಕಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
![](http://newsbites.in/wp-content/uploads/2022/11/IMG_20221101_171057.jpg)
ತಾಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಪಕ್ಕದಲ್ಲಿರುವ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮಹಮ್ಮದ್ ಕೈಫ್ (14) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ.
ಶಾಲೆಗೆ ವಿದ್ಯಾರ್ಥಿ ಹೋಗಲು ಹಿಂದೇಟು ಹಾಕುತ್ತಿದ್ದ. ಈ ಹಿನ್ನೆಲೆ ಮನೆಯವರ ಒತ್ತಾಯದಿಂದ ಸಹೋದರ ಕರೆದುಕೊಂಡು ಹೋಗಿ ಶಾಲೆಗೆ ಬಿಟ್ಟು ಬಂದಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ಮಹಮ್ಮದ್ ಕೈಫ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.