ಕರಾವಳಿ

ಪುತ್ತೂರು: ವಿದ್ಯಾರ್ಥಿ ‘ರೈಟ್ ಪೋಯಿ’ ಎಂದಾಗ ನಿರ್ವಾಹಕನನ್ನು ಬಿಟ್ಟು ಬಸ್ ಚಲಾಯಿಸಿಕೊಂಡು ಹೋದ ಚಾಲಕ..!



ಪುತ್ತೂರು: ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆ ಪುತ್ತೂರಿನಲ್ಲಿ ನ.3ರಂದು ಬೆಳಿಗ್ಗೆ ನಡೆದಿದೆ.

ಪುತ್ತೂರುನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ನಿಲ್ದಾಣದಿಂದ ಬಸ್ ಹೊರಡುವ ವೇಳೆ ವಿದ್ಯಾರ್ಥಿಯೋರ್ವ ‘ರೈಟ್ ಪೋಯಿ’ ಎಂದು ಹೇಳಿದ್ದ.‌ ನಿರ್ವಾಹಕನೇ ‘ರೈಟ್ ಪೋಯಿ’ ಎಂದು ಹೇಳಿದ್ದಾಗಿ ಭಾವಿಸಿದ ಚಾಲಕ ಬಸ್ ಚಲಾಯಿಸಿದ್ದಾರೆ. ಇದೇ ವೇಳೆ ಬೇರೊಂದು ಕೆ.ಎಸ್.ಆರ್.ಟಿ.ಸಿ. ಬಸ್ ಮೂಲಕ‌ ನಿರ್ವಾಹಕ ಆಗಮಿಸಿ ತನ್ನ ಕರ್ತವ್ಯದ ಬಸ್ ಸೇರಿಕೊಂಡಿದ್ದಾರೆ. ಚಾಲಕ ಮತ್ತು ನಿರ್ವಾಹಕನ‌ ಅಚಾತುರ್ಯದಿಂದಾಗಿ ಕೆಲ ನಿಮಿಷ ಸಮಯ ಬಸ್ ಸಂಚಾರ ತಡವಾಯಿತು.

Leave a Reply

Your email address will not be published. Required fields are marked *

error: Content is protected !!