ಕುರಿಯ: ಅನಾರೋಗ್ಯದಲ್ಲಿರುವ ಹಿರಿಯ ಕಾಂಗ್ರೆಸ್ಸಿಗನ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ: ಧನ ಸಹಾಯ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಕಾಂಗ್ರೆಸ್ಸಿಗ ಕುರಿಯ ನಿವಾಸಿ ಚನಿಯ ಮೊಗೇರ ಅವರ ಮನೆಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ ವಿಶ್ವನಾಥ ರೈ,
ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶಿವರಾಮ ಆಳ್ವ,
ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಸೂಫಿ ಕುರಿಯ, ಗ್ರಾ. ಪಂ ಸದಸ್ಯ ಯಾಕೂಬ್ ಕುರಿಯ,
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನಕಾರ್ಯದರ್ಶಿ ರಶೀದ್ ಅಮ್ಚಿನಡ್ಕ,
ಬೂತ್ ಅಧ್ಯಕ್ಷ ಅಸಿಪ್ ಎ.ಆರ್ ಮೊದಲಾದವರು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧನ ಸಹಾಯ ಮಾಡಿದರು.