ಕರಾವಳಿ

ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ವ್ಯಕ್ತಿ ಗಂಭೀರ: ಕುಂಬ್ರದಲ್ಲಿ ನಡೆದ ಘಟನೆ



ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.5ರಂದು ನಡೆದಿದೆ.

ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ)ರವರು ಬಸ್ಸಿನೊಳಗಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡರು.

 ಇವರು ಮಾಡಾವಿನಿಂದ ಕುಂಬ್ರಕ್ಕೆ ಬಸ್ ಹತ್ತಿದ್ದರು. ಕುಂಬ್ರ ತಲುಪುತ್ತಿದ್ದಂತೆ ಬಸ್‌ನಿಂದ ಇಳಿಯಲು ಬಸ್ಸಿನೊಳಗಡೆ ನಿಂತುಕೊಂಡಿದ್ದ ವೇಳೆ ಬಸ್ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ಸುಲೈಮಾನ್‌ರವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಗಾಯಾಳುವನ್ನು ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಗ್ರಾಮಾಂತರ ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!