ಕಾರಿನ ಗ್ಲಾಸ್ ಒಡೆದು ಐದು ಲಕ್ಷ ರೂ. ಕಳ್ಳತನ:
ಕಾರು ಚಾಲಕರೇ ಹುಷಾರ್
ಶಿಕಾರಿಪುರ: ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗ ನಿಲ್ಲಿಸಿದ ಕಾರಿನ ಗ್ಲಾಸ್ ಒಡೆದು ಕಾರಿನ ಸೀಟಿನ ಮೇಲೆ ಇಟ್ಟಿದ್ದ ಐದು ಲಕ್ಷ ರೂ. ಹಣವನ್ನು ಕಳ್ಳರು ಕಳ್ಳತನ ಮಾಡಿದ ಘಟನೆ ಶನಿವಾರ ನಡೆದಿದೆ.
![](http://newsbites.in/wp-content/uploads/2022/11/IMG-20221105-WA0079.jpg)
ಕಪ್ಪನಹಳ್ಳಿ ಗ್ರಾಮದ ನಿವಾಸಿ ಕೇಶವ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಿಂದ ಐದು ಲಕ್ಷ ಹಣ ಬಿಡಿಸಿಕೊಂಡು ಬಂದಿದ್ದರು. ಈ ಹಣವನ್ನು ತಮ್ಮ ಕಾರಿನ ಸೀಟಿನಲ್ಲಿ ಇಟ್ಟು ಡಿಸಿಸಿ ಬ್ಯಾಂಕ್ ಒಳಗೆ ಹೋದ ಸಂದರ್ಭದಲ್ಲಿ ಕಳ್ಳರು ಕಾರಿನ ಗ್ಲಾಸ್ ಒಡೆದು ಹಣ ಲಪಟಾಯಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್ ಪಿ ಶಿವಾನಂದ ಮದರಖಂಡಿ, ಸಿಪಿಐ ಲಕ್ಷ್ಮಣ್, ಪಟ್ಟಣ ಪೊಲೀಸ್ ಠಾಣೆ ಪಿಎಸ್ ಐ ಪ್ರಶಾಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳ್ಳತನ ಪ್ರಕರಣ ಸಂಬಂಧಿಸಿದಂತೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.