ರಾಜಕೀಯರಾಜ್ಯ

ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಧರಣಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗಿ



ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಧರಣಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಶರೋನ್ ಸಿಕ್ವೇರಾ, ಬ್ಲಾಕ್ ಸೇವಾದಳದ ಅಧ್ಯಕ್ಷ ವಿಶ್ವಜೀತ್ ಅಮ್ಮುಂಜ, ಬ್ಲಾಕ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸನತ್ ರೈ ಏಳ್ನಾಡುಗುತ್ತು, ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಕುಮಾರ್ ಭಂಡಾರಿ ಮೊದಲಾದವರು ಭಾಗವಹಿಸಿ ಅಕ್ರಮ ಟೋಲ್ ತೆರವಿಗೆ ನಡೆಯುತ್ತಿರುವ ಧರಣಿಗೆ ಬೆಂಬಲ ಸೂಚಿಸಿದರು.

Leave a Reply

Your email address will not be published. Required fields are marked *

error: Content is protected !!