ಕೆ.ಆರ್.ಎಸ್ ಬೃಂದಾವನದಲ್ಲಿ ಕಾಣಿಸಿಕೊಂಡ ಚಿರತೆ: ಭಯಭೀತರಾದ ಪ್ರವಾಸಿಗರು
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಬೃಂದಾವನದಲ್ಲಿ ಅ.6ರಂದು ಸಂಜೆ ಚಿರತೆ ಕಾಣಿಸಿಕೊಂಡ ಕಾರಣ ಪ್ರವಾಸಿಗರು ಕೆಲಕಾಲ ಭಯಭೀತರಾದರು.
ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನ ಉದ್ಯಾನದಲ್ಲಿ ಸಾವಿರಾರು ಪ್ರವಾಸಿಗರು ಇದ್ದರು. ಮೀನುಗಾರಿಕಾ ಇಲಾಖೆಯ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದು ಭದ್ರತಾ ಸಿಬ್ಬಂಂದಿಯ ಕಣ್ಣಿಗೆ ಬಿದ್ದಿದೆ.
ತಕ್ಷಣ ಜಾಗೃತರಾದ ಭದ್ರತಾ ಸಿಬ್ಬಂದಿ ಪ್ರವಾಸಿಗರನ್ನು ಬೃಂದಾವನದಿಂದ ಹೊರಗೆ ಕಳುಹಿಸಿದ್ದಾರೆ.
ಸದ್ಯ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.