ರಾಜಕೀಯರಾಜ್ಯ

ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಪೋಸ್ಟರ್: ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆ



ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಹಲವಡೆ ಪೋಸ್ಟರ್ ಅಂಟಿಸಿದ್ದಕ್ಕೆ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ನ.8ರಂದು ಲಾಡ್ಜಿಂಗ್ ಕ್ರಾಸಿನಲ್ಲಿ ಜಮಾಯಿಸಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ಈ ವ್ಯಕ್ತಿಯನ್ನು ಚಿತ್ತಾಪುರದಲ್ಲಿ ಯಾರಾದರೂ ನೋಡಿದ್ದೀರಾ? ಕಳೆದ ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದಾರೆ. ಈ ವ್ಯಕ್ತಿ ಎಲ್ಲಾದರೂ ಕಂಡು ಬಂದರೆ ಚಿತ್ತಾಪುರಕ್ಕೆ ಭೇಟಿ ನೀಡುವಂತೆ ತಿಳಿಸಿ ಎಂದು ಬಿಜೆಪಿ ಮುಖಂಡ ಅರವಿಂದ ಚವಾಣ್ ಪೋಸ್ಟರ್ ಅಂಟಿಸಿದ್ದೇ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಕಾರಣವಾಗಿದೆ.

ಸಮಾಜದಲ್ಲಿ ಅಶಾಂತಿ ಮೂಡಿಸಲು ಸಂಚು ನಡೆಸಿರುವ ಅರವಿಂದ ಚವಾಣ್ ವಿರುದ್ಧ ಪ್ರಕರಣ ದಾಖಲಿಸಬೇಕು. ಶಾಸಕ ಪ್ರಿಯಾಂಕ್ ಖರ್ಗೆ ಅವರ ಕುರಿತು ಬಹಳ ಹಗುರವಾಗಿ ನಡೆದುಕೊಂಡಿರುವ ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ರಸ್ತೆ ತಡೆದು ಆಕ್ರೋಶ ವ್ಯಕ್ತ ಮಾಡಿದರು.

Leave a Reply

Your email address will not be published. Required fields are marked *

error: Content is protected !!