ಜಿಲ್ಲೆ

ಜಟ್ಟಿಪ್ಪಳ್ಳ:  ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ನ. ಪಂ. ಮುಖ್ಯ ಅಧಿಕಾರಿಗೆ ಮದ್ರಸ ಅಧ್ಯಾಪಕ ಒಕ್ಕೂಟದ ಮನವಿ



ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಜಟ್ಟಿಪ್ಪಳ್ಳ ಭಾಗದ ರಸ್ತೆಯು ತೀವ್ರ ಹದಗೆಟ್ಟು ಸಾರ್ವಜನಿಕ ಸಂಚಾರಕ್ಕೆ  ಸಂಕಷ್ಟ ಅನುಭವಿಸುತ್ತಿದೆ. ಆದ್ದರಿಂದ ಈ ರಸ್ತೆಯನ್ನು ಅಭಿವೃದ್ಧಿಪಡಿಸಿ ಕೊಡುವಂತೆ ಆಗ್ರಹಿಸಿ  ಸುಳ್ಯ ಮದರಸ  ಒಕ್ಕೂಟದ ವತಿಯಿಂದ ನಗರ ಪಂಚಾಯತಿ ಮುಖ್ಯ ಅಧಿಕಾರಿ ಎಮ್ ಎಚ್ ಸುಧಾಕರ್ ರವರನ್ನು ಭೇಟಿ ಮಾಡಿ  ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ರೇಂಜ್ ಅಧ್ಯಕ್ಷ ಮುಹಮ್ಮದ್ ಸಖಾಫಿ ಮೊಗರ್ಪಣೆ, ಪ್ರಧಾನ ಕಾರ್ಯದರ್ಶಿ ನಿಝಾರ್ ಸಖಾಫಿ ಮುಡೂರು,ಮಿಶನರಿ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ, ಅಧ್ಯಾಪಕರುಗಳಾದ ಹುಸೈನಾರ್ ಮದನಿ ಕುಂಜಿಲ, ಸಿರಾಜ್ ಸಅದಿ ಅಲೆಕ್ಕಾಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!