ಕರಾವಳಿ

ಮಾಣಿ: ಆಟೋ ಚಾಲಕ ಹಠಾತ್ ಹೃದಯಾಘಾತದಿಂದ ಮೃತ್ಯು



ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9ರಂದು ಮಾಣಿ ಸಮೀಪ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ ಮೃತರು.

ಜಯಕರ ಪೂಜಾರಿ ಅವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಆಟೋ ರಿಕ್ಷಾ ನಿಲ್ಲಿಸಿದ್ದು, ಮಕ್ಕಳು ಜೆರಾಕ್ಸ್ ತೆಗೆದು ಹಿಂದಿರುಗಿದ ವೇಳೆ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ.

ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ ಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!