ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಬೆಂಗಳೂರು: ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಥಾಪಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ (ಪ್ರಗತಿಯ ಪ್ರತಿಮೆ) ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು.
ಇದಕ್ಕೂ ಮುನ್ನ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಗೆ ಚಾಲನೆ ನೀಡಿದ ಅವರು, 84 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕೆಂಪೇಗೌಡರ ‘ಪ್ರಗತಿ ಪ್ರತಿಮೆ’ ಅನಾವರಣಗೊಳಿಸಿದರು.
ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎ.ನಾರಾಯಣಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ಸಹಿತ ಹಲವರು ಉಪಸ್ಥಿತರಿದ್ದರು.