ಸುಳ್ಯ: ಕಲ್ಲುಗುಂಡಿ ಸಮೀಪ KSRTC ಬಸ್-ಲಾರಿ ನಡುವೆ ಅಪಘಾತ: ಹಲವರಿಗೆ ಗಾಯ
ಸುಳ್ಯ ಕಲ್ಲುಗುಂಡಿ ಸಮೀಪ ಮಾಣಿ ಮೈಸೂರು ಹೆದ್ದಾರಿ ಕಡಪಾಲಬಳಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲವು ಪ್ರಯಾಣಿಕರಿಗೆ ಗಾಯವಾದ ಘಟನೆ ಇದೀಗ ವರದಿಯಾಗಿದೆ.
![](http://newsbites.in/wp-content/uploads/2022/11/IMG_20221115_164846-160x300.jpg)
ಅಪಘಾತದಿಂದ ಲಾರಿ ಚಾಲಕ ಸೀಟಿನಲ್ಲಿ ಸಿಲುಕಿಕೊಂಡಿದ್ದು ಸ್ಥಳೀಯರು ಕಾರ್ಯಾಚರಣೆಯ ಮೂಲಕ ಹೊರತರಲು ಪ್ರಯತ್ನಿಸುತ್ತಿದ್ದಾರೆ.
ಮಡಿಕೇರಿಯಿಂದ ಉಡುಪಿ ಕಡೆ ತೆರಳುತ್ತಿದ್ದ ಬಸ್ಸು ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಲಾರಿ ನಡುವೆ ಈ ಡಿಕ್ಕಿ ಸಂಭವಿಸಿದೆ.
![](http://newsbites.in/wp-content/uploads/2022/11/IMG_20221115_164806-1.jpg)
ಸ್ಥಳೀಯರು ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸುತ್ತಿದ್ದಾರೆ.